Latestಕ್ರೈಂ

ಯುವಕನೊಂದಿಗೆ 32ರ ಆಂಟಿಯ ಲವ್ವಿ ಡವ್ವಿ!!ರೀಲ್ಸ್ ಪ್ರಿಯಕರನಿಗಾಗಿ ಗಂಡನನ್ನೇ ಕೊಂದ ಪಾಪಿ ಪತ್ನಿ!ದುಪ್ಪಟಾದಿಂದಲೇ ಕತ್ತು ಹಿಸುಕಿ ಮರ್ಡರ್ !

445

ನ್ಯೂಸ್‌ ನಾಟೌಟ್:  ರೀಲ್ಸ್ ಪ್ರಿಯತಮನಿಗಾಗಿ ಮಹಿಳೆಯೊಬ್ಬಳು ದುಪ್ಪಟ್ಟಾದಿಂದ ತನ್ನ ಪತಿಯ ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ಬಗ್ಗೆವರದಿಯಾಗಿದೆ. ಇಬ್ಬರ ಕಳ್ಳಸಂಬಂಧ ಪತ್ತೆಹಚ್ಚಿದ ಬಳಿಕ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಮುಗಿಸಿದ್ದಾಳೆ ಪತ್ನಿ. ರವೀನಾ (32) ಮತ್ತು ಸುರೇಶ್ ಕೊಲೆ ಆರೋಪಿಗಳಾಗಿದ್ದು, ಇಬ್ಬರನ್ನೂ ಪೊಲೀಸರು ಇದೀಗ ಬಂಧಿಸಿದ್ದಾರೆ.ಹರಿಯಾಣದ ಹಿಸಾರ್ (Haryana’s Hisar) ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಆಂಟಿಗೆ ಲವ್‌?

32 ವರ್ಷದ ರವೀನಾ ಮತ್ತು ರೀಲ್ಸ್ ಸ್ಟಾರ್‌ ಸುರೇಶ್‌ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದು,ಹರಿಯಾಣದ ಪ್ರೇಮ್ ನಗರಲ್ಲಿ ಇಬ್ಬರು ಒಟ್ಟಿಗೆ ವಿಡಿಯೋ ಮಾಡಲು ಆರಂಭಿಸಿದರು.ಇದರಿಂದ ಇಬ್ಬರಿಗೂ ಸ್ನೇಹ ಚಿಗುರಿತು. ಇದಕ್ಕೆ ರವೀನಾಳ ಪತಿ ಪ್ರವೀಣ್ ಮತ್ತು ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದು, ಆದಾಗ್ಯೂ ಸುಮಾರು ಒಂದೂವರೆ ವರ್ಷಗಳ ಕಾಲ ಇಬ್ಬರು ಕಂಟೆಂಟ್ ಕ್ರಿಯೇಟ್ ಮಾಡುತ್ತಿದ್ದರು. ಇದರಿಂದ ಫಾಲೋವರ್ಸ್ ಗಳ ಸಂಖ್ಯೆ 34,000ಕ್ಕೆ ತಲುಪಿತ್ತು.ಬಳಿಕ ಇತರ ಕಲಾವಿದರನ್ನೂ ಸೇರಿಸಿಕೊಂಡು ರೀಲ್ಸ್ ಮಾಡುತ್ತಿದ್ದರು. ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಿತ್ತು. ರೀಲ್ಸ್ ಮಾಡುತ್ತಲೇ ರವೀನಾ ಮತ್ತು ಸುರೇಶ್‌ ಚಕ್ಕಂದ ಆಡಲು ಶುರು ಮಾಡಿದ್ದರು.

ಇದೇ ರೀತಿ ಮುಂದುವರಿದು ಕಳೆದ ಮಾರ್ಚ್‌ 25ರಂದು ರವೀನಾಳ ಪತಿ ಪ್ರವೀಣ್ (35), ಇವರಿಬ್ಬರೂ ಅಕ್ರಮ ಸಂಬಂಧ ಇರುವುದನ್ನು ಪತ್ತೆಹಚ್ಚಿದ್ದರು ಎನ್ನಲಾಗಿದೆ. ಹೀಗಾಗಿ ರವೀನಾ ತನ್ನ ಪ್ರಿಯಕರ ಸುರೇಶ್‌ ಜೊತೆ ಸೇರಿ ದುಪ್ಪಟ್ಟಾದಿಂದ ಪತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಪ್ರವೀಣ್ ಎಲ್ಲಿದ್ದಾನೆ ಅಂತ ಮನೆಯವರು ಕೇಳಿದಾಗ ತನಗೇನು ಗೊತ್ತೇ ಇಲ್ಲವೆಂಬಂತೆ ರವೀನಾ ನಟಿಸಿದ್ದಾಳೆ. ಅದೇ ದಿನ ರಾತ್ರಿ 2:30ರ ಸುಮಾರಿಗೆ ಪ್ರಿಯಕರನ ಬೈಕ್ ನಲ್ಲಿ (Lover Bike) ಪ್ರವೀಣ್ ಶವ ಸಾಗಿಸಿದ್ದಾಳೆ. ಹಿಸಾರ್ ನಲ್ಲಿರುವ ತನ್ನ ಮನೆಯಿಂದ 6 ಕಿಮೀ ದೂರದಲ್ಲಿರುವ ದಿನೊಡ್ ರಸ್ತೆ ಬಳಿಯ ಚರಂಡಿಗೆ ಶವ ಎಸೆದುಬಂದಿದ್ದಾಳೆ.

ಪೊಲೀಸರಿಗೆ ಪ್ರವೀಣ್ ಶವ ಕೊಳೆತ ಸ್ಥಿತಿಯಲ್ಲಿ ಕಳೆದ ಮಾರ್ಚ್‌ 28ರಂದು ಪತ್ತೆಯಾಗಿತ್ತು.ಬಳಿಕ ಆಕೆಯ ಮನೆಯ ರಸ್ತೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ರವೀನಾ ಹೆಲ್ಮೆಟ್ ಧರಿಸಿ ಬೈಕ್ ನಲ್ಲಿ ಬಂದ ವ್ಯಕ್ತಿಯೊಂದಿಗೆ ತನ್ನ ಮುಖಮುಚ್ಚಿಕೊಂಡು ಶವ ಸಾಗಿದ್ದಾಳೆ. 2 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗುವಾಗ ಬೈಕ್ ನಲ್ಲಿ ಇಬ್ಬರೇ ಬಂದಿದ್ದಾರೆ. ಈ ವೇಳೆ ಮಧ್ಯದಲ್ಲಿದ್ದ ಮೃತದೇಹ ನಾಪತ್ತೆಯಾಗಿತ್ತು. ಬಳಿಕ ಮಾಹಿತಿ ಖಚಿತಪಡಿಸಿಕೊಂಡ ಪೊಲೀಸರು ಇಬ್ಬರನ್ನೂ ಬಂಧಿಸಿ ಜೈಲಿಗಟ್ಟಿದ್ದಾರೆ. ರವೀನಾ ಮತ್ತು ಪ್ರವೀಣ್ ಗೆ 6 ವರ್ಷದ ಮಗ ಇದ್ದು, ಇದೀಗ ಆತ ತನ್ನ ಅಜ್ಜನೊಂದಿಗೆ ವಾಸಿಸುತ್ತಿದ್ದಾನೆ ಎಂದು ತಿಳಿದು ಬಂದಿದೆ.

See also  ದುಗಲಡ್ಕ: ಮದ್ಯದ ನಶೆಯಲ್ಲಿ ನೆರೆಮನೆಯವನ ಬೆನ್ನಿಗೆ ಕಡಿದ ಭೂಪ..! ಮುಂದೇನಾಯ್ತು..? ಇಲ್ಲಿದೆ ನೋಡಿ ಸಂಕ್ಷಿಪ್ತ ವರದಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget