ಕ್ರೈಂವೈರಲ್ ನ್ಯೂಸ್

ಯುವ ಬ್ರಿಗೇಡ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಬಿಜೆಪಿ ಕಾರ್ಯಕರ್ತರಿಂದಲೇ ನಡಿಯಿತಾ ಕೃತ್ಯ?

193

ನ್ಯೂಸ್ ನಾಟೌಟ್ : ಯುವ ಬ್ರಿಗೇಡ್ ಕಾರ್ಯಕರ್ತನ (Yuva Brigade) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ನಾಲ್ಕನೇ ಆರೋಪಿಯು ನಗರ ಪಾಲಿಕೆಯ ಬಿಜೆಪಿ ಸದಸ್ಯೆಯೊಬ್ಬರ ಸಹೋದರ ಎಂಬುದು ತಿಳಿದುಬಂದಿದ್ದು, ಹಲವು ಬಗೆಯ ಊಹೆಗಳಿಗೆ ಈಗ ಉತ್ತರ ಸಿಕ್ಕಿದೆ ಮತ್ತು ಬಿಜೆಪಿಗೆ ಮುಖಭಂಗವಾಗಿದೆ ಎನ್ನಲಾಗಿದೆ.

ಹನುಮ ಜಯಂತಿ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ನಡೆದ ಘಟನೆ ಸಂಬಂಧ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಿವಾಸಕ್ಕೆ ಇಂದು ಬಿಜೆಪಿ ತಂಡ ಭೇಟಿ ನೀಡಿತ್ತು. ಅಷ್ಟೇ ಅಲ್ಲ, ಸತ್ಯಶೋಧನೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿತ್ತು ಎನ್ನಲಾಗಿದೆ.

ಸತ್ಯ ಶೋಧನೆಗಿಳಿದ ಬಿಜೆಪಿಗೆ ಬಿಜೆಪಿ ತಂಡಕ್ಕೆ ಆಶ್ಚರ್ಯ ಕಾದಿತ್ತು, ಕಾರಣ ಪ್ರಕರಣದ ಆರೋಪಿಯೊಬ್ಬ ಮೈಸೂರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯೆಯೊಬ್ಬರ ಸಹೋದರ ಎಂಬ ಸತ್ಯ ಬಹಿರಂಗವಾಗಿದೆ. ಪ್ರ‍್ರಕರಣದ ನಾಲ್ಕನೇ ಆರೋಪಿ ಶಂಕರ್ ಅಲಿಯಾಸ್ ತುಪ್ಪಾ ಮೈಸೂರು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯೆಯ ಸಹೋದರ ಎನ್ನುವುದು ಬಯಲಾಗಿದೆ.
ಪ್ರಕರಣದ ಎ1 ಆರೋಪಿ ಮಣಿಕಂಠ, ಸಂದೇಶ-ಎ2, ಅನಿಲ್-ಎ3, ಶಂಕರ್ ಅಲಿಯಾಸ್ ತುಪ್ಪಾ-ಎ4, ಮಂಜು-ಎ5, ಹ್ಯಾರಿಸ್-ಎ6 ಆರೋಪಿಗಳಾಗಿದ್ದಾರೆ. ಪ್ರಕರಣದ ಆರೋಪಿಯ ವಿಚಾರ ತಿಳಿದ ಬಿಜೆಪಿಗೆ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರ ಪ್ರಕರಣದ A1 ಮತ್ತು A2 ಆರೋಪಿಗಳಾದ ಮಣಿಕಂಠ ಅಲಿಯಾಸ್ ಕೊಳೆ ಮಣಿ, ಸಂದೇಶ್‌ನನ್ನು ಪೊಲೀಸರು ಬಂಧಿಸಿದ್ದರು. ಇಂದು ನಾಲ್ವರನ್ನು ಬಂಧಿಸಿದ್ದಾರೆ. A3 ಅನಿಲ್, A4 ಶಂಕರ್ ಅಲಿಯಾಸ್ ತುಪ್ಪ, A5 ಮಂಜು ಹಾಗೂ A6 ಹ್ಯಾರಿಸ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

See also  ಸುಳ್ಯದ ಗೂಡ್ಸ್ ವಾಹನ ಪಿರಿಯಾಪಟ್ಟಣದಲ್ಲಿ ಅಪಘಾತ, 27 ವರ್ಷದ ಯುವಕ ದಾರುಣ ಸಾವು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget