ಕ್ರೈಂವೈರಲ್ ನ್ಯೂಸ್

ಜಮೀರ್‌ ಅಹಮದ್‌ ಖಾನ್‌ ತಂಗಿದ್ದ ಹೋಟೆಲ್‌ಗೆ ರಾತ್ರೋರಾತ್ರಿ ದಾಳಿ ನಡೆಸಿದ್ಯಾಕೆ ಪೊಲೀಸರು..? ಈ ಬಗ್ಗೆ ಸಚಿವ ಹೇಳಿದ್ದೇನು?

173

ನ್ಯೂಸ್‌ ನಾಟೌಟ್‌: ಕಾಂಗ್ರೆಸ್‌ ಪರ ಪ್ರಚಾರಕ್ಕೆ ತೆರಳಿರುವ ರಾಜ್ಯದ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ (Zameer Ahmed Khan) ತಂಗಿದ್ದ ಹೈದರಾಬಾದ್‌ನ ಹೋಟೆಲ್‌ಗೆ ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿದ ಘಟನೆ ತೆಲಂಗಾಣದಲ್ಲಿ ನ.21 ರಂದು ನಡೆದಿದೆ.

ವಿಧಾನಸಭಾ ಚುನಾವಣೆಯಲ್ಲಿ (Telangana assembly election 2023)ಗೆ ಪ್ರಚಾರಕ್ಕೆ ತೆರಳಿದ್ದ ವೇಳೆ ಅಕ್ರಮ ಹಣ ಸಂಗ್ರಹ ಮಾಡಿ ಇಟ್ಟಿರಬಹುದು ಎಂಬ ಸಂಶಯದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಆದರೆ, ದಾಳಿಯ ವೇಳೆ ಏನೂ ಸಿಕ್ಕಿಲ್ಲ ಎಂದು ಜಮೀರ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ.
ಜಮೀರ್‌ ಖಾನ್‌ ಪಂಚ ರಾಜ್ಯ ಚುನಾವಣೆಯಲ್ಲಿ ಮುಸ್ಲಿಂ ಬಾಹುಳ್ಯ ಇರುವ ಪ್ರದೇಶಗಳಲ್ಲಿ ಕಾಂಗ್ರೆಸ್‌ ಪಾಲಿಗೆ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದಾರೆ. ರಾಜಸ್ಥಾನ ಮತ್ತು ತೆಲಂಗಾಣ ಚುನಾವಣೆಗೆ ಸಂಬಂಧಿಸಿದ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ.
ಹೀಗೆ ತೆಲಂಗಾಣ ಚುನಾವಣೆಯಲ್ಲಿ ಮತ್ತೊಂದು ಸುತ್ತಿನ ಪ್ರಚಾರಕ್ಕಾಗಿ ಜಮೀರ್‌ ಖಾನ್‌ ಅವರು ನವೆಂಬರ್‌ 22ರಂದು ಹೈದರಾಬಾದ್‌ಗೆ ಭೇಟಿ ನೀಡಿದ್ದರು. ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್‌ಗೆ ಹೋಗಿ ವಿಶ್ರಾಂತಿ ಪಡೆದಿದ್ದರು, ಈ ವೇಳೆ ಅಕ್ರಮ ಹಣ ಸಂಗ್ರಹದ ಮಾಹಿತಿ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

See also  ಬಂಟ್ವಾಳ:ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯಸ್ಥ ಹುಡುಗಿಗೆ ಲೈಕ್ ಕೊಟ್ಟ ಯುವಕ ,ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯಿಂದ ತರಾಟೆ,ಮನನೊಂದು ಯುವಕ ಆತ್ಮಹತ್ಯೆಗೆ ಶರಣು
  Ad Widget   Ad Widget   Ad Widget   Ad Widget   Ad Widget   Ad Widget   Ad Widget